Skip to main content

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು.


ದಿ ಕೇರಳ ಸ್ಟೋರಿ 

ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು.
ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು.
ಮೈಸೂರುಹುಲಿ ಟಿಪ್ಪುಸುಲ್ತಾನ್ ನು ಕೇರಳದ ಮಲಬಾರ್ ಪ್ರಾಂತ್ಯದ ಮೇಲೆ ಅನೇಕ ಬಾರಿ ದಾಳಿ ಮಾಡಿ, ಈ ನಂಬೂದರಿ ರನ್ನು ಬಗ್ಗುಬಡಿದು, ಈ ಅಮಾನವೀಯ ಪದ್ಧತಿಯನ್ನು ತನ್ನ ಕಾಲದಲ್ಲಿ ನಿಷೇಧಿಸಿದನು.

ಟಿಪ್ಪುಸುಲ್ತಾನನ ಮರಣದ ನಂತರ ಮತ್ತೇ ಸ್ತನತೆರಿಗೆ ಪದ್ಧತಿಯು ಜಾರಿಗೆ ಬಂದಿತು.

ಕೆಳವರ್ಗದ ಈಳವ(ಈಡಿಗ) ಜಾತಿಗೆ ಸೇರಿದ್ದ ನಂಗೇಲಿ ಎಂಬ ಮಹಿಳೆಯು ತನ್ನ ದೇಹವನ್ನು ಪೂರ್ತಿ ಮುಚ್ಚಿಕೊಂಡಿರುತ್ತಾಳೆ. ಇದಕ್ಕಾಗಿ , ನಂಬೂದರಿ ರಾಜರುಗಳು ತೆರಿಗೆಯನ್ನು ವಸೂಲಿ ಮಾಡಲು ತಮ್ಮ ಸೈನಿಕರನ್ನು ಅವಳ ಮನೆಯ ಬಳಿ ಕಳುಹಿಸಿದಾಗ; ಆ ಮಹಾತಾಯಿ ತನ್ನ ಸ್ತನವನ್ನೇ ಕುಯ್ದು ಒಂದು ಬಾಳೆ ಎಲೆಯಲ್ಲಿಟ್ಟು ತೋರಿಸುತ್ತಾಳೆ. ಆದರೆ ಆಕೆ ಮಾತ್ರ ಅತಿಯಾದ ರಕ್ತಸ್ರಾವದಿಂದ ಪ್ರಾಣವನ್ನು ಕಳೆದುಕೊಳ್ಳುತ್ತಾಳೆ.ನಂಗೇಲಿಯ ಚಿತೆಗೆ ಹಾರಿ ಆಕೆಯ ಪತಿಯೂ ಪ್ರಾಣಾರ್ಪಣೆ ಮಾಡುತ್ತಾನೆ. ನಂಗೇಲಿಯ ಊರು "ಮುಲ (ಮೊಲೆ )ಪರಂಬು  ":ಎಂದು ಆ ಬಳಿಕ ಕರೆಯಲ್ಪಟ್ಟಿತು (ಇನ್ನೊಂದು ಮೂಲದ ಪ್ರಕಾರ ನಂಗೇಲಿಯ ಮೊಲೆಯನ್ನು ಕತ್ತರಿಸಲಾಯಿತು. ಅದನ್ನು ಪ್ರತಿಭಟಿಸಿದ ಪತಿಯನ್ನು ಆಕೆಯ ಚಿತೆಗೆ ಎಸೆಯಲಾಯಿತು ) 
ನಂಗೇಲಿಯ ಈಳವ ಸಮಾಜದಿಂದ ಬಂದಂತಹ ನಾರಾಯಣ ಗುರುಗಳು ಈ ಅಮಾನುಷ ಪದ್ಧತಿಯ ವಿರುದ್ಧ ಹೋರಾಡುತ್ತಾರೆ. ಇವರ ಹೋರಾಟವನ್ನು ಪರಿಗಣಿಸಿ ಅಂದಿನ ಬ್ರಿಟಿಷ್ ಸರ್ಕಾರವು ಈ ಸ್ತನತೆರಿಗೆ ಪದ್ಧತಿಯನ್ನು 19 ನೇ ಶತಮಾನದ ಅಂತ್ಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುತ್ತಾರೆ.

Comments