Skip to main content

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

ಪ್ರಾಣ ಉಳಿಸಲು ಉಟ್ಟ ಸೀರೆ ಬಿಚ್ಚಿಕೊಟ್ಟ ಮಹಾತಾಯಿ ಮತ್ತು ಪಬ್ಲಿಕ್ ಟಿವಿಯ ಈ ಇಬ್ಬರು ಹೀರೋಗಳು..!


ಪ್ರಾಣ ಉಳಿಸಲು ಉಟ್ಟ ಸೀರೆ ಬಿಚ್ಚಿಕೊಟ್ಟ ಮಹಾತಾಯಿ  ಮತ್ತು ಪಬ್ಲಿಕ್ ಟಿವಿಯ ಈ  ಇಬ್ಬರು ಹೀರೋಗಳು..! 

 ಮೊದಲು ಈ ಫೋಟೋದಲ್ಲಿ ಕಾಣುತ್ತಿರುವ ಸೀರೆಯ ಕಥೆ ಹೇಳಿಬಿಡ್ತೀನಿ. ನಿನ್ನೆ ಕೆ ಆರ್ ಸರ್ಕಲ್ ನ ಅಂಡರ್ ಪಾಸ್ ನಲ್ಲಿ ನೀರು ತುಂಬಿ ಕಾರಿನಲ್ಲಿ ಮುಳುಗಿದ್ದ ಕುಟುಂಬದವರು ಸಹಾಯಕ್ಕಾಗಿ ಅರಚಾಡುತ್ತಿದ್ರು. ಲೋಕಾಯುಕ್ತ ಕಚೇರಿಯ ಬಳಿ  ಇದ್ದ  ರಿಪೋರ್ಟರ್ ನಾಗೇಶ್  ಅರಚಾಟದ ಸದ್ದು ಕೇಳಿ ಸ್ಥಳಕ್ಕೆ ಹೋಗುತ್ತಾರೆ. ಅವರ ಜೊತೆಗಿದ್ದ ಪಬ್ಲಿಕ್ ಟಿವಿ ಕ್ಯಾಬ್ ಚಾಲಕ ವಿಜಯ್ ಈಜು ಬರುತ್ತಿದ್ರಿಂದ ಬೇರೆ ಯೋಚನೆ ಮಾಡದೇ ನೀರಿನೊಳಗೆ ಇಳಿದು ಅಲ್ಲಿದ್ದವರ ರಕ್ಷಣೆಗೆ ಮುಂದಾಗುತ್ತಾರೆ. ನಾಗೇಶ್ ರಸ್ತೆಯಲ್ಲಿ ಹೋಗೋ ಬರೋರನ್ನು ನಿಲ್ಲಿಸಿ ರಕ್ಷಣೆ ಮಾಡುವಂತೆ ಮನವಿ ಮಾಡಿಕೊಳ್ತಾ ಇರ್ತಾರೆ. ಅಷ್ಟರಲ್ಲಿ ನಾಗೇಶ್ ಕಣ್ಣಮುಂದೆ ದೇವತೆ ಕಾಣಿಸಿದ್ದಾರೆ. ಅಂಡರ್ ಪಾಸ್, ನ ಹೊರಗೆ ನಿಂತಿದ್ದ  ಮಹಿಳೆ ಈ ಅರಚಾಟ, ಒದ್ದಾಟ ನೋಡಿ ಯಾವ ಯೋಚನೆಯನ್ನು ಮಾಡದೇ  ತಾನು ಉಟ್ಟ ಸೀರೆಯನ್ನು ಬಿಚ್ಚಿಕೊಟ್ರಂತೆ..ಇದನ್ನು ಇಲ್ಲೆ ಕಂಬಕ್ಕೆ ಕಟ್ಟಿ ಕೆಳಗೆ ಇದ್ದವರಿಗೆ ಕೊಡಿ..ಸೀರೆ ಹಿಡ್ಕೊಂಡು ಮೇಲೆ ಬರಲಿ ಅಂದುಬಿಟ್ರಂತೆ. ನಾಗೇಶ್ ಗೆ ಮಾತೆ ಬಾರದ ಸ್ಥಿತಿ. ಇನ್ನು ಸೀರೆ ಬಿಚ್ಚಿಕೊಟ್ಟ ಮಹಿಳೆಯನ್ನು ನೋಡಿ  ಅಲ್ಲೆ ಇದ್ದ ಇನ್ನುಳಿದ ಮಹಿಳೆಯರು ದುಪ್ಪಟ್ಟಾವನ್ನು ಕೊಟ್ಟಿದ್ದಾರೆ. ಅಷ್ಟರಲ್ಲಿ ಕ್ವಿಕ್ ರೆಸ್ಕ್ಯೂ ಟೀಮ್ ವಾಹನ ರಸ್ತೆಯಲ್ಲಿ ಪಾಸ್ ಆಗ್ತಿರೋದನ್ನು ನೋಡಿದ ನಾಗೇಶ್ ತಕ್ಷಣ ಅವರಿಗೆ ಮನವಿ ಮಾಡಿಕೊಂಡು ಸ್ಥಳಕ್ಕೆ ಕರೆಸಿದ್ದಾರೆ. ಹಾ ಸೀರೆ ಬಿಚ್ಚಿ ಕೊಟ್ಟ ಮಹಿಳೆಗೆ ಪಕ್ಕದಲ್ಲಿಯೇ ನಿಂತ ವ್ಯಕ್ತಿಯೊರ್ವ ಶರ್ಟು ಬಿಚ್ಚಿ ಕೊಟ್ಟು ಆಕೆಯನ್ನು ಆಟೋದಲ್ಲಿ ಕೂರಿಸಿ ಕಳಿಸಿದ್ದಾರೆ.  ಆ ಮಹಾ ತಾಯಿ ಯಾರು ಅನ್ನೋದು ಗೊತ್ತಾಗಲಿಲ್ಲ. ಆದ್ರೇ ಆಕೆಯ ಸೀರೆ ಅಲ್ಲಿದ್ದ ಜೀವಗಳನ್ನು ಕಾಪಾಡಿದೆ. ಇನ್ನು ವಿಜಯ್ , ಕಾರಿನೊಳಗೆ ಇದ್ದ ನಾಲ್ವರನ್ನು ಹೇಗೋ ಎತ್ತಿ ಕಾರಿನ ಮೇಲೆ ಕೂರಿಸಿ ಜೀವವನ್ನು ಉಳಿಸಿದ್ದಾರೆ.

 ಇನ್ನೋರ್ವ ಯುವತಿಯನ್ನು ಎಳೆಯುವಾಗ ಆಕೆ ಸೀಟಿನ ಮಧ್ಯ ಭಾಗಕ್ಕೆ ಸಿಕ್ಕಿಹಾಕಿಕೊಂಡಿದ್ದಾರೆ.. ತುಂಬಾ ಹೊತ್ತು ಒದ್ದಾಡಿದ ವಿಜಯ್ ಕಷ್ಟ ಪಟ್ಟು ಆಕೆಯನ್ನು ಮೇಲೆತ್ತಿ ರೆಸ್ಕ್ಯೂ ಟೀಮ್ ಗೆ ಒಪ್ಪಿಸಿದ್ದಾರೆ. ಆದ್ರೇ ಆಸ್ಪತ್ರೆ ಯಲ್ಲಿ ಚಿಕಿತ್ಸೆ ವಿಳಂಬವಾಗಿದೆ. ಅಲ್ಲೂ ಕೂಡ ನಮ್ಮ ವರದಿಗಾರ ಲೋಕೇಶ್ ಸೇರಿದಂತೆ ಬೇರೆ ಚಾನಲ್ ನವರು ಗಲಾಟೆ ಮಾಡಿದ ಮೇಲೆ ಟ್ರೀಟ್ ಮೆಂಟ್ ಶುರುಮಾಡಿದ್ದಾರೆ. ಅಷ್ಟರಲ್ಲಿ ಆಕೆಯ ಪ್ರಾಣ ಪಕ್ಷಿ ಹಾರಿಹೋಗಿದೆ. ವಿಜಯ್ ,ನಾಗೇಶ್ ಕಣ್ಣಲ್ಲಿ ನಾಲ್ವರನ್ನು ಉಳಿಸಿದ ಸಂಭ್ರಮಕ್ಕಿಂತ ಆ ಯುವತಿಯ ಪ್ರಾಣ ಉಳಿಸಿಕೊಳ್ಳೋಕೆ ಆಗಿಲ್ಲವಲ್ಲ ಅನ್ನೋ ನೋವು ಇದೆ. ಜೀವ ಪಣಕ್ಕಿಟ್ಟು ಬೇರೆಯವರ ಬದುಕು ಉಳಿಸಲು  ವಿಜಯ್ ಸಾಹಸ,  ಸಾರ್ವಜನಿಕ ಸ್ಥಳದಲ್ಲಿ ಉಟ್ಟ ಸೀರೆಯನ್ನೇ ಬಿಚ್ಚಿಕೊಟ್ಟ ಮಹಾ ತಾಯಿ ಇವರನ್ನೆಲ್ಲ ನೋಡುವಾಗ  ನಮ್ಮ ನಡುವೆ ಅದೆಂಥ ಅದ್ಭುತ ಗುಣವಿರುವ ಮನುಷ್ಯರು ಇರುತ್ತರಲ್ಲ ಅಂತಾ ಅನಿಸುತ್ತಿದೆ 😍

Comments