Skip to main content

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

ಪಕ್ಷ, ಸಿದ್ಧಾಂತದ ವಿಚಾರ ಬಂದಾಗ ಮಾತೂ ಆಡುತ್ತೇನೆ, ಕೆಲಸವನ್ನೂ ಮಾಡುತ್ತೇನೆ, "ಮಾದರಿ ಸಂಸದ" Pratap Simha.


ಮಾದರಿ ಸಂಸದ❤🙏 Pratap Simha 

ಪಕ್ಷ, ಸಿದ್ಧಾಂತದ ವಿಚಾರ ಬಂದಾಗ ಮಾತೂ ಆಡುತ್ತೇನೆ, ಕೆಲಸವನ್ನೂ ಮಾಡುತ್ತೇನೆ. 
———————————————
ಹೌದು, ವಿಧಾನಸಭೆ ಚುನಾವಣೆ ಸೋಲಿನ ನಂತರ ನೊಂದು ಹತಾಶನಾಗಿದ್ದೆ. ನಾನು ತಂದಿರುವ ಒಂದೊಂದು ಯೋಜನೆಗಳನ್ನು ತ್ವರಿತ ಅನುಷ್ಠಾನಗೊಳಿಸಲು ನಮ್ಮದೇ ರಾಜ್ಯ ಸರ್ಕಾರವಿದ್ದರೆ ಖಂಡಿತ ಅನುಕೂಲವಾಗುತ್ತಿತ್ತು. ನಮ್ಮ ಸರ್ಕಾರವಿದ್ದಿದ್ದರಿಂದಲೇ ಎಲ್ಲ ವಿರೋಧ ಅಡೆತಡೆಗಳನ್ನು ಮೆಟ್ಟಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಯಿತು. ರಾಜಕೀಯ ಹಿನ್ನಡೆಯ ಹೊರತಾಗಿಯೂ ನಾನು ಹಿಡಿದ ಕೆಲಸ ಬಿಡುವುದಿಲ್ಲ. ಈಗಾಗಲೇ ನಮ್ಮ ಸರ್ಕಾರದಿಂದ ಅನುಮೋದನೆ ಅಥವಾ sanction  ಪಡೆದುಕೊಂಡಿರುವ ಹಾಗು ಅಂತಿಮಘಟ್ಟಕ್ಕೆ ತಂದಿರುವ ಈ ಕೆಳಕಂಡ ಕೆಲಸಗಳನ್ನು ಮಾಡಲು ನಿಮ್ಮ ಆಶೀರ್ವಾದ ಮತ್ತು ಪ್ರೋತ್ಸಾಹ ಸದಾ ನನ್ನ ಮೇಲಿರಲಿ. 

1. ಮೈಸೂರು - ಬೆಂಗಳೂರು ದಶಪಥ ರಸ್ತೆಯ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸುವುದು.

2. ಮೈಸೂರು – ಕುಶಾಲನಗರ ನಾಲ್ಕು ಪಥ ರಸ್ತೆ ಕಾಮಗಾರಿಯನ್ನು (4,100 crore) ಶೀಘ್ರವಾಗಿ ಪ್ರಾರಂಭಿಸುವುದು.

3. ಮೈಸೂರು ಮಹಾನಗರ ಪಾಲಿಕೆಯು ವಿದ್ಯಾರಣ್ಯಪುರಂ ಸೀವೇಜ್ ಫಾರಂನಲ್ಲಿ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯವನ್ನು (ಲೆಗಸಿ ವೇಸ್ಟ್) ವಿಲೇವಾರಿ ಮಾಡುವ ಯೋಜನೆಯ (58 crore) ತ್ವರಿತ ಅನುಷ್ಠಾನ. 

4.  ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ “ಪ್ರಸಾದ್” ಯೋಜನೆಯಡಿಯಲ್ಲಿ (49.21 crore) ಅಭಿವೃದ್ದಿಪಡಿಸುವುದು.

5. ಮೈಸೂರು ವಸ್ತು ಪ್ರದರ್ಶನ ಮೈದಾನವನ್ನು  ಕೇಂದ್ರ ಸರ್ಕಾರದ “ಸ್ವದೇಶಿ ದರ್ಶನ” ಯೋಜನೆಯಡಿ (More than 100 crore) ಅಭಿವೃದ್ಧಿ ಮಾಡಲು DPR ಸಿದ್ದಪಡಿಸುವುದು.

6. ಜಲ ಜೀವನ್ ಮಿಷನ್(JJM) ಯೋಜನೆಯಡಿಯಲ್ಲಿ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹಾಗೂ ಇತರೆ 303 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು (239 crores) ಅನುಷ್ಠಾನಗೊಳಿಸುವ ಸಂಬಂಧ ಸಭೆ.

7. ಕೊಡಗು ಜಿಲ್ಲೆಯಾದ್ಯಂತ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು (300 crore) ಅನುಷ್ಠಾನಗೊಳಿಸುವ ಸಂಬಂಧ ಸಭೆ.

8. ಮೈಸೂರು ವಿಮಾನ ನಿಲ್ದಾಣದ ಉನ್ನತೀಕರಣ ಹಾಗೂ ವಿಸ್ತರಣೆಗಾಗಿ ಅಗತ್ಯವಿರುವ ಭೂಸ್ವಾಧೀನಕ್ಕೆ (319 crore) ಸಂಬಂಧಿಸಿದಂತೆ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ.

9. ಶಾಸ್ತ್ರೀಯ ಕನ್ನಡ ಭಾಷಾ ಅತ್ಯುನ್ನತ ಅಧ್ಯಯನ ಕೇಂದ್ರವನ್ನು (27 crore) ಸ್ಥಾಪಿಸುವುದು.

10. OPRR (ಹೊರವರ್ತುಲ ರಸ್ತೆ) ನಿರ್ಮಾಣದ (10 crore for DPR) ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ.

11.  ಮೈಸೂರು ತಾಲ್ಲೂಕು, ಹುಯಿಲಾಳು ಗ್ರಾಮದಲ್ಲಿ KSCA ವತಿಯಿಂದ ಅಂತರಾಷ್ರ್ಟೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ (26 acres) ನಿರ್ಮಾಣ ಮಾಡುವುದು.

12. ರೈಲ್ವೆ ಇಲಾಖೆಯ ಅಭಿವೃದ್ಧಿ ಕಾಮಗಾರಿಯನ್ನು (total 364 crores) ತುರ್ತಾಗಿ ಕೈಗೊಳ್ಳುವ ಸಂಬಂಧ ಗತಿ ಶಕ್ತಿ ಹಾಗೂ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ.

13. ಮೈಸೂರಿನ ಪಟ್ಟಣ ಪಂಚಾಯಿತಿ (Shrirampura-44.40 crore, Rammanalli- 34.90 crore) ಹಾಗೂ ನಗರ ಸಭೆ (Hootagalli 62 crores) ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನಗೊಳಿಸುವ ಸಂಬಂಧ ಸಭೆ.

14. ಮೈಸೂರು ತಾಲ್ಲೂಕು ದಡದಕಲ್ಲಹಳ್ಳಿ ಗ್ರಾಮದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಸಂಶೋಧನಾ ಘಟಕ ಮತ್ತು Palliative care ನಿರ್ಮಾಣ (ಹಾಗೂ ಪಿ.ಕೆ.ಟಿ.ಬಿ ಆವರಣದಲ್ಲಿ ಫೆರಿಫೆರಲ್ ಕ್ಯಾನ್ಸರ್ ಕೇಂದ್ರವನ್ನು (50 crore) ಸ್ಥಾಪಿಸುವುದು.

15. ಗ್ಯಾಸ್ ಪೈಪ್ ಲೈನ್ ಅಳವಡಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವುದು. 

16.ಹುಣಸೂರಿನ  49 ಕೆರೆಗಳಿಗೆ  ನೀರು ತುಂಬಿಸುವ (85 crores) ಯೋಜನೆಯ ಟೆಂಡರ್ ಕರೆಸಿ ಕಾಮಗಾರಿ ಆರಂಭಿಸುವುದು. 

17. ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಹುಣಸೂರು ತಾಲ್ಲೂಕಿನ 164 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು (211 crores) ಅನುಷ್ಠಾನಗೊಳಿಸುವುದು.  

18. ಬೃಹತ್ ಮೈಸೂರು (Greater Mysuru) ನಿರ್ಮಾಣದ ಸಂಬಂಧ ಮೈಸೂರು ಪಾಲಿಕೆಯಲ್ಲಿ ಪ್ರಸ್ತಾವನೆ ಮಂಡನೆ. 

19. ಪಿರಿಯಾಪಟ್ಟಣ ನಗರದಲ್ಲಿರುವ ಗ್ರಾಮದೇವತೆ ಮಸಣಿಕಮ್ಮ ದೇವಾಲಯದ ಮರುನಿರ್ಮಾಣ (10.5 crore).

ಧನ್ಯವಾದಗಳು 🙏🙏🙏

Comments